Advertisement
ಜಿಲ್ಲೆ

ಮಡಿಕೇರಿಯಲ್ಲಿ ತುಳುವೆರ ಜನಪದ ಕೂಟದ ಸಭೆ

Share

ಮಡಿಕೇರಿ :  ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.

ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.

ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

7 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

16 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

17 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago