ಮಡಿಕೇರಿ : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ ಸಮಿತಿಯ ಪ್ರಮುಖರ ಸಭೆ ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರ ಕ್ಷೇಮಾಭಿವೃದ್ಧಿಗೆ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಜಿಲ್ಲೆಯಲ್ಲಿ ತುಳು ಬಾಂಧವರ ಪದ್ಧತಿ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಸಮಿತಿ ಸೇರಿದಂತೆ ಮೂರು ತಾಲೂಕು ಸಮಿತಿಗಳನ್ನು ಆಗಸ್ಟ್ ತಿಂಗಳಿನಲ್ಲಿ ಪುನರ್ ರಚಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದರು.
ಜಿಲ್ಲಾ ಗೌರವ ಸಲಹೆಗಾರ ಬಿ.ಬಿ.ಐತ್ತಪ್ಪ ರೈ , ಜಿಲ್ಲಾ ಸಂಘದ ಸ್ಥಾಪಕ ಸಲಹೆಗಾರ ಕೆ.ಆರ್.ಬಾಲಕೃಷ್ಣ ರೈ , ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದರಘು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿದರು.
ಸಭೆಯಲ್ಲಿ ಮಂಗಳೂರಿನ ಹರೀಶ್ ಆಳ್ವ ಸಂಘಟನೆಯನ್ನು ಬಲ ಪಡಿಸಲು ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು.
ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಸಂಧ್ಯಾ ಗಣೇಶ್ ರೈ, ಮಡಿಕೇರಿ ತಾಲೂಕು ನಿರ್ದೇಶಕರುಗಳಾದ ಆರ್.ಬಿ.ರವಿ, ಲೀಲಾ ಶೇಷಮ್ಮ, ಮಡಿಕೇರಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ತಾಲೂಕು ಸದಸ್ಯ ಜಗದೀಶ್ ಆಚಾರ್ಯ ಸೇರಿದಂತೆ ಹಲವರು ಸೂಕ್ತ ಸಲಹೆಗಳನ್ನು ನೀಡಿ ಗಮನ ಸೆಳೆದರು. ಪಿ.ಎಂ.ರವಿ ನಿರೂಪಿಸಿ, ವಂದಿಸಿದರು. ಫೋಟೋ
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…