Advertisement
ಸುದ್ದಿಗಳು

ಮಡಿಕೇರಿಯಲ್ಲಿ ಹುಚ್ಚ ವೆಂಕಟನ “ಹುಚ್ಚು” ಬಿಡಿಸಿದ ಸಾರ್ವಜನಿಕರು…!

Share

ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್‍ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.

ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

3 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

3 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

13 hours ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

1 day ago

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 days ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

2 days ago