ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.
ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…