ಸುದ್ದಿಗಳು

ಮಡಿಕೇರಿಯಲ್ಲಿ ಹುಚ್ಚ ವೆಂಕಟನ “ಹುಚ್ಚು” ಬಿಡಿಸಿದ ಸಾರ್ವಜನಿಕರು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

Advertisement
Advertisement

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್‍ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.

ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

5 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

6 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

6 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

12 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

13 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

20 hours ago