ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.
ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…