ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.
ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…