ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.
ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…