ಮಡಿಕೇರಿ : ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಸಮಾಜದ ಸರ್ವರಿಗೂ ಬೇಕಾಗಿರುವ ವಿಚಾರಗಳನ್ನು ಪ್ರಾರಂಭದಿಂದಲೂ ಬಿತ್ತರಿಸುತ್ತಿದೆ.
ಕೊಡಗು ಜಿಲ್ಲೆಯ ಪ್ರತಿಭೆಗಳ ಪರಿಚಯ, ಕೃಷಿಯ ಚಿತ್ರಣ ಹಾಗೂ ಸಾಧನೆ, ಮಹಿಳೆಯರ-ಮಕ್ಕಳ ಕಾರ್ಯಕ್ರಮಗಳಲ್ಲದೇ ಜನರಿಗೆ ತಾಜಾ ಮಾಹಿತಿ ನೀಡುವ ಕೊಡವ ಭಾಷೆಯ ಸುದ್ದಿ ಸಮಾಚಾರ,ಅರೆಭಾಷೆಯ ಸುದ್ದಿಜೊಂಪೆ,ಬ್ಯಾರಿ ಭಾಷೆಯ ಸುದ್ದಿಸಾರ-ಇವುಗಳ ಪ್ರಸಾರ, ನಿಧನದ ಸುದ್ದಿ, ಸರಕಾರದ ಇಲಾಖೆಗಳ, ಸಂಘ ಸಂಸ್ಥೆಗಳ ಅಭಿವೃದ್ಧಿ ಯೋಜನೆಗಳ ಪ್ರಚಾರವಲ್ಲದೇ, ಚಿಂತನ, ಚಿತ್ರಗೀತೆಗಳು, ನೇರ ರಸಪ್ರಶ್ನೆಗಳೊಂದಿಗೆ ಸಂವಾದ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ, ಜಾನಪದ ಗೀತೆಗಳು, ಭಕ್ತಿಗೀತೆಗಳು, ಭಾವಗೀತೆಗಳು, ಹಿಂದಿ ಚಿತ್ರಗೀತೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಾರ್ತೆಗಳು, ದಿನವೂ ಶುಭನುಡಿ ಹೀಗೆ ಉಪಯುಕ್ತ ವಿಚಾರಗಳೊಂದಿಗೆ ಆಕಾಶವಾಣಿಯು ಈ ಭಾಗದ ಜನಪ್ರಿಯ ಮಾಧ್ಯಮವಾಗಿದೆ.
6 ಕಿಲೋ ವಾಟ್ಸ್ ಸಾಮಥ್ರ್ಯದಿಂದ ಶುರುವಾದ ಮಡಿಕೇರಿ ಆಕಾಶವಾಣಿಯು ಈಗ ತನ್ನ ಪ್ರಸಾರದ ಸಾಮಥ್ರ್ಯವನ್ನು 10 ಕಿಲೋ ವಾಟ್ಸ್ ಹೆಚ್ಚಿಸಿಕೊಂಡು ಪ್ರಸಾರದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಈ ಸಂದರ್ಭದಲ್ಲಿ ಆಕಾಶವಾಣಿ -ನಮ್ಮವಾಣಿ ರೂಪಕ ಬೆಳಗ್ಗೆ 9:10 ಮಧ್ಯಾಹ್ನ 1:30 ಹಾಗೂ ಸಂಜೆ 5 ಗಂಟೆಗೆ ಮಡಿಕೇರಿ ಕೇಂದ್ರದಿಂದ ಮೂಡಿಬಂತು ಎಂದು ಕಾರ್ಯಕ್ರಮ ನಿರ್ವಾಹಕರಾದ ಉಣ್ಣಿಕೃಷ್ಣನ್ ಮತ್ತು ವಿಜಯ್ ಅಂಗಡಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೇಡಿಯೋ ಜಾಹೀರಾತು ಪ್ರತಿನಿಧಿ ಶೌಕತ್ ಹಾಗೂ ರೇಡಿಯೋ ಶ್ರೋತೃ ಭಾಗೀರಥಿ ಹುಲಿತಾಳ ಅವರನ್ನು ಸನ್ಮಾನಿಸಲಾಯಿತು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…