ಮಡಿಕೇರಿ : ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಸಮಾಜದ ಸರ್ವರಿಗೂ ಬೇಕಾಗಿರುವ ವಿಚಾರಗಳನ್ನು ಪ್ರಾರಂಭದಿಂದಲೂ ಬಿತ್ತರಿಸುತ್ತಿದೆ.
ಕೊಡಗು ಜಿಲ್ಲೆಯ ಪ್ರತಿಭೆಗಳ ಪರಿಚಯ, ಕೃಷಿಯ ಚಿತ್ರಣ ಹಾಗೂ ಸಾಧನೆ, ಮಹಿಳೆಯರ-ಮಕ್ಕಳ ಕಾರ್ಯಕ್ರಮಗಳಲ್ಲದೇ ಜನರಿಗೆ ತಾಜಾ ಮಾಹಿತಿ ನೀಡುವ ಕೊಡವ ಭಾಷೆಯ ಸುದ್ದಿ ಸಮಾಚಾರ,ಅರೆಭಾಷೆಯ ಸುದ್ದಿಜೊಂಪೆ,ಬ್ಯಾರಿ ಭಾಷೆಯ ಸುದ್ದಿಸಾರ-ಇವುಗಳ ಪ್ರಸಾರ, ನಿಧನದ ಸುದ್ದಿ, ಸರಕಾರದ ಇಲಾಖೆಗಳ, ಸಂಘ ಸಂಸ್ಥೆಗಳ ಅಭಿವೃದ್ಧಿ ಯೋಜನೆಗಳ ಪ್ರಚಾರವಲ್ಲದೇ, ಚಿಂತನ, ಚಿತ್ರಗೀತೆಗಳು, ನೇರ ರಸಪ್ರಶ್ನೆಗಳೊಂದಿಗೆ ಸಂವಾದ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ, ಜಾನಪದ ಗೀತೆಗಳು, ಭಕ್ತಿಗೀತೆಗಳು, ಭಾವಗೀತೆಗಳು, ಹಿಂದಿ ಚಿತ್ರಗೀತೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಾರ್ತೆಗಳು, ದಿನವೂ ಶುಭನುಡಿ ಹೀಗೆ ಉಪಯುಕ್ತ ವಿಚಾರಗಳೊಂದಿಗೆ ಆಕಾಶವಾಣಿಯು ಈ ಭಾಗದ ಜನಪ್ರಿಯ ಮಾಧ್ಯಮವಾಗಿದೆ.
6 ಕಿಲೋ ವಾಟ್ಸ್ ಸಾಮಥ್ರ್ಯದಿಂದ ಶುರುವಾದ ಮಡಿಕೇರಿ ಆಕಾಶವಾಣಿಯು ಈಗ ತನ್ನ ಪ್ರಸಾರದ ಸಾಮಥ್ರ್ಯವನ್ನು 10 ಕಿಲೋ ವಾಟ್ಸ್ ಹೆಚ್ಚಿಸಿಕೊಂಡು ಪ್ರಸಾರದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಈ ಸಂದರ್ಭದಲ್ಲಿ ಆಕಾಶವಾಣಿ -ನಮ್ಮವಾಣಿ ರೂಪಕ ಬೆಳಗ್ಗೆ 9:10 ಮಧ್ಯಾಹ್ನ 1:30 ಹಾಗೂ ಸಂಜೆ 5 ಗಂಟೆಗೆ ಮಡಿಕೇರಿ ಕೇಂದ್ರದಿಂದ ಮೂಡಿಬಂತು ಎಂದು ಕಾರ್ಯಕ್ರಮ ನಿರ್ವಾಹಕರಾದ ಉಣ್ಣಿಕೃಷ್ಣನ್ ಮತ್ತು ವಿಜಯ್ ಅಂಗಡಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೇಡಿಯೋ ಜಾಹೀರಾತು ಪ್ರತಿನಿಧಿ ಶೌಕತ್ ಹಾಗೂ ರೇಡಿಯೋ ಶ್ರೋತೃ ಭಾಗೀರಥಿ ಹುಲಿತಾಳ ಅವರನ್ನು ಸನ್ಮಾನಿಸಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…