Advertisement
ಸುದ್ದಿಗಳು

ಮಡಿಕೇರಿ ಆಕಾಶವಾಣಿಗೆ 26 ನೇ ವರ್ಷಾಚರಣೆಯ ಸಂಭ್ರಮ

Share

ಮಡಿಕೇರಿ : ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಸಮಾಜದ ಸರ್ವರಿಗೂ ಬೇಕಾಗಿರುವ ವಿಚಾರಗಳನ್ನು ಪ್ರಾರಂಭದಿಂದಲೂ ಬಿತ್ತರಿಸುತ್ತಿದೆ.

ಕೊಡಗು ಜಿಲ್ಲೆಯ ಪ್ರತಿಭೆಗಳ ಪರಿಚಯ, ಕೃಷಿಯ ಚಿತ್ರಣ ಹಾಗೂ ಸಾಧನೆ, ಮಹಿಳೆಯರ-ಮಕ್ಕಳ ಕಾರ್ಯಕ್ರಮಗಳಲ್ಲದೇ ಜನರಿಗೆ ತಾಜಾ ಮಾಹಿತಿ ನೀಡುವ ಕೊಡವ ಭಾಷೆಯ ಸುದ್ದಿ ಸಮಾಚಾರ,ಅರೆಭಾಷೆಯ ಸುದ್ದಿಜೊಂಪೆ,ಬ್ಯಾರಿ ಭಾಷೆಯ ಸುದ್ದಿಸಾರ-ಇವುಗಳ ಪ್ರಸಾರ, ನಿಧನದ ಸುದ್ದಿ, ಸರಕಾರದ ಇಲಾಖೆಗಳ, ಸಂಘ ಸಂಸ್ಥೆಗಳ ಅಭಿವೃದ್ಧಿ ಯೋಜನೆಗಳ ಪ್ರಚಾರವಲ್ಲದೇ, ಚಿಂತನ, ಚಿತ್ರಗೀತೆಗಳು, ನೇರ ರಸಪ್ರಶ್ನೆಗಳೊಂದಿಗೆ ಸಂವಾದ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ, ಜಾನಪದ ಗೀತೆಗಳು, ಭಕ್ತಿಗೀತೆಗಳು, ಭಾವಗೀತೆಗಳು, ಹಿಂದಿ ಚಿತ್ರಗೀತೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಾರ್ತೆಗಳು, ದಿನವೂ ಶುಭನುಡಿ ಹೀಗೆ ಉಪಯುಕ್ತ ವಿಚಾರಗಳೊಂದಿಗೆ ಆಕಾಶವಾಣಿಯು ಈ ಭಾಗದ ಜನಪ್ರಿಯ ಮಾಧ್ಯಮವಾಗಿದೆ.

6 ಕಿಲೋ ವಾಟ್ಸ್ ಸಾಮಥ್ರ್ಯದಿಂದ ಶುರುವಾದ ಮಡಿಕೇರಿ ಆಕಾಶವಾಣಿಯು ಈಗ ತನ್ನ ಪ್ರಸಾರದ ಸಾಮಥ್ರ್ಯವನ್ನು 10 ಕಿಲೋ ವಾಟ್ಸ್ ಹೆಚ್ಚಿಸಿಕೊಂಡು ಪ್ರಸಾರದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಈ ಸಂದರ್ಭದಲ್ಲಿ ಆಕಾಶವಾಣಿ -ನಮ್ಮವಾಣಿ ರೂಪಕ ಬೆಳಗ್ಗೆ 9:10 ಮಧ್ಯಾಹ್ನ 1:30 ಹಾಗೂ ಸಂಜೆ 5 ಗಂಟೆಗೆ ಮಡಿಕೇರಿ ಕೇಂದ್ರದಿಂದ ಮೂಡಿಬಂತು ಎಂದು ಕಾರ್ಯಕ್ರಮ ನಿರ್ವಾಹಕರಾದ ಉಣ್ಣಿಕೃಷ್ಣನ್ ಮತ್ತು ವಿಜಯ್ ಅಂಗಡಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೇಡಿಯೋ ಜಾಹೀರಾತು ಪ್ರತಿನಿಧಿ ಶೌಕತ್ ಹಾಗೂ ರೇಡಿಯೋ ಶ್ರೋತೃ ಭಾಗೀರಥಿ ಹುಲಿತಾಳ ಅವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago