ಮಡಿಕೇರಿ : ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28ರಂದು 103.1 ಮೆಗಾ ಹಟ್ರ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. ಸಮಾಜದ ಸರ್ವರಿಗೂ ಬೇಕಾಗಿರುವ ವಿಚಾರಗಳನ್ನು ಪ್ರಾರಂಭದಿಂದಲೂ ಬಿತ್ತರಿಸುತ್ತಿದೆ.
ಕೊಡಗು ಜಿಲ್ಲೆಯ ಪ್ರತಿಭೆಗಳ ಪರಿಚಯ, ಕೃಷಿಯ ಚಿತ್ರಣ ಹಾಗೂ ಸಾಧನೆ, ಮಹಿಳೆಯರ-ಮಕ್ಕಳ ಕಾರ್ಯಕ್ರಮಗಳಲ್ಲದೇ ಜನರಿಗೆ ತಾಜಾ ಮಾಹಿತಿ ನೀಡುವ ಕೊಡವ ಭಾಷೆಯ ಸುದ್ದಿ ಸಮಾಚಾರ,ಅರೆಭಾಷೆಯ ಸುದ್ದಿಜೊಂಪೆ,ಬ್ಯಾರಿ ಭಾಷೆಯ ಸುದ್ದಿಸಾರ-ಇವುಗಳ ಪ್ರಸಾರ, ನಿಧನದ ಸುದ್ದಿ, ಸರಕಾರದ ಇಲಾಖೆಗಳ, ಸಂಘ ಸಂಸ್ಥೆಗಳ ಅಭಿವೃದ್ಧಿ ಯೋಜನೆಗಳ ಪ್ರಚಾರವಲ್ಲದೇ, ಚಿಂತನ, ಚಿತ್ರಗೀತೆಗಳು, ನೇರ ರಸಪ್ರಶ್ನೆಗಳೊಂದಿಗೆ ಸಂವಾದ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ, ಜಾನಪದ ಗೀತೆಗಳು, ಭಕ್ತಿಗೀತೆಗಳು, ಭಾವಗೀತೆಗಳು, ಹಿಂದಿ ಚಿತ್ರಗೀತೆಗಳು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಾರ್ತೆಗಳು, ದಿನವೂ ಶುಭನುಡಿ ಹೀಗೆ ಉಪಯುಕ್ತ ವಿಚಾರಗಳೊಂದಿಗೆ ಆಕಾಶವಾಣಿಯು ಈ ಭಾಗದ ಜನಪ್ರಿಯ ಮಾಧ್ಯಮವಾಗಿದೆ.
6 ಕಿಲೋ ವಾಟ್ಸ್ ಸಾಮಥ್ರ್ಯದಿಂದ ಶುರುವಾದ ಮಡಿಕೇರಿ ಆಕಾಶವಾಣಿಯು ಈಗ ತನ್ನ ಪ್ರಸಾರದ ಸಾಮಥ್ರ್ಯವನ್ನು 10 ಕಿಲೋ ವಾಟ್ಸ್ ಹೆಚ್ಚಿಸಿಕೊಂಡು ಪ್ರಸಾರದ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. ಈ ಸಂದರ್ಭದಲ್ಲಿ ಆಕಾಶವಾಣಿ -ನಮ್ಮವಾಣಿ ರೂಪಕ ಬೆಳಗ್ಗೆ 9:10 ಮಧ್ಯಾಹ್ನ 1:30 ಹಾಗೂ ಸಂಜೆ 5 ಗಂಟೆಗೆ ಮಡಿಕೇರಿ ಕೇಂದ್ರದಿಂದ ಮೂಡಿಬಂತು ಎಂದು ಕಾರ್ಯಕ್ರಮ ನಿರ್ವಾಹಕರಾದ ಉಣ್ಣಿಕೃಷ್ಣನ್ ಮತ್ತು ವಿಜಯ್ ಅಂಗಡಿ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರೇಡಿಯೋ ಜಾಹೀರಾತು ಪ್ರತಿನಿಧಿ ಶೌಕತ್ ಹಾಗೂ ರೇಡಿಯೋ ಶ್ರೋತೃ ಭಾಗೀರಥಿ ಹುಲಿತಾಳ ಅವರನ್ನು ಸನ್ಮಾನಿಸಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…