ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಕೇಂದ್ರ ಹಾಗೂ ರಾಜ್ಯ ಗುಪ್ತದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯಲ್ಲಿ ಹಾಜರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…