ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು.
ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಕೇಂದ್ರ ಹಾಗೂ ರಾಜ್ಯ ಗುಪ್ತದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯಲ್ಲಿ ಹಾಜರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…