Advertisement
ಜಿಲ್ಲೆ

ಮಡಿಕೇರಿ : ಜಿಲ್ಲಾ ವಿಪತ್ತು ನಿರ್ವಹಣಾ ಸಭೆ : ಮಳೆ ಮುನ್ನೆಚ್ಚರಿಕಾ ಕ್ರಮದ ಕುರಿತು ಚರ್ಚೆ

Share

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಆದರೆ ಕಳೆದೆರಡು ದಿನಗಳಿಂದ ಬಲವಾದ ಗಾಳಿ ಬೀಸುತ್ತಿದ್ದು, ಜೊತೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ನಡುವೆ ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಜಿಲ್ಲಾಡಳಿತ ಈಗಾಗಲೇ ಕೈಗೊಂಡಿದ್ದು, ವಿಪತ್ತಿನಿಂದ ಸಂಭವಿಸಬಹುದಾದ ಹಾನಿ ಕಡಿಮೆಗೊಳಿಸುವ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ತುರ್ತಾಗಿ ಕೊಡಗು ಜಿಲ್ಲೆಗೆ ಸಮಗ್ರ ಪುನರ್ ನಿರ್ಮಾಣ, ಹಾನಿ ತಗ್ಗಿಸುವ ಕ್ರಮಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಲು ಮತ್ತು ರಚನಾತ್ಮಕ ಯೋಜನೆ ರೂಪಿಸಲು ವಿಷಯ ತಜ್ಞರು, ಸ್ಥಳೀಯರ ಹಾಗೂ ಸಂಬಂಧಪಟ್ಟವರ ಜೊತೆಗೂಡಿಸಿ, ಕಾರ್ಯಾಗಾರವನ್ನು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗ್ರಾಮೀಣ ಮಟ್ಟದಲ್ಲಿ ರೂಪಿಸುತ್ತಿರುವ ಗ್ರಾಮೀಣ ವಿಪತ್ತು ನಿರ್ವಹಣಾ ಯೋಜನೆಯನ್ನು ಪ್ರಥಮ ಹಂತದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಜಿಲ್ಲೆಯ ಸೂಕ್ಷ್ಮ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಥಮ ಹಂತದಲ್ಲಿ ಇತರ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಚರ್ಚಿಸಲಾಯಿತು.
ಇದರೊಂದಿಗೆ ವಿಪತ್ತು ನಿರ್ವಹಣೆ ಸಂಬಂಧಿಸಿದಂತೆ ಮಹಿಳಾ, ಮಕ್ಕಳ, ಸಮುದಾಯ ಕೇಂದ್ರಿತ ಮತ್ತು ವಿವಿಧ ತರಬೇತಿಗಳನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಪತ್ತು ಪರಿಹಾರವನ್ನು ಸುಸೂತ್ರವಾಗಿ ಅರ್ಹರಿಗೆ ತಲುಪಿಸಲು ಸಹಕಾರವಾಗುವಂತೆ ತಾಲ್ಲೂಕು ಮಟ್ಟ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಯ್ದೆ ಮತ್ತು ಪರಿಹಾರ ಲಭ್ಯತೆಯ ಬಗ್ಗೆ ತರಬೇತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರಾಧಿಕಾರದ ಸದಸ್ಯರಾದ ಜಿ.ಪಂ.ಸಿಇಓ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಆರ್‍ಸಿಎಚ್. ಅಧಿಕಾರಿ ಡಾ.ಆನಂದ್, ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್ ಶ್ರೀಕಂಠಯ್ಯ, ಯುನಿಸೆಫ್ ಸಮಾಲೋಚಕರಾದ ಪ್ರಭಾತ್ ಕಲ್ಕೂರ ಇತರರು ಹಾಜರಿದ್ದರು.

Advertisement
Advertisement

ಈ ನಡುವೆ ಸಂಪಿಗೆಕಟ್ಟೆ ಬಳಿ ಬಿರುಕು ಬಿಟ್ಟಿದ್ದ ರಸ್ತೆ ಕಾಮಗಾರಿಯನ್ನು ಸರಿಪಡಿಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ನಗರಸಭೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

18 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago