ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…