ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…