ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…
ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್ ಉಚಿತ(Free Current). ಇಂಥ…
ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…