ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…