ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್ಗೆ ಸ್ಕ್ರೀನ್ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು ಬಿಗಿದುಕೊಂಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನು ಗಮನಿಸಿದ ಜೈಲು ಸಿಬ್ಬಂದಿಗಳು ತಕ್ಷಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಆತ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…