ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಜನೋತ್ಸವಕ್ಕೆ ಚಾಲನೆ ದೊರೆತಿದೆ.
ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಾ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.
ಸೆ. 30 ರಿಂದ ಅ. 3ರ ವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ.9 ರಂದು ಬೆಳಗ್ಗಿನ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…