ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ಮಹತ್ವ ಪಡೆದುಕೊಂಡಿರುವ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಆರಂಭಗೊಂಡಿದೆ. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆ ಮಾರಿಯಮ್ಮ ಕರಗಗಳ ನಗರ ಸಂಚಾರದ ಮೂಲಕ ದಸರಾ ಜನೋತ್ಸವಕ್ಕೆ ಚಾಲನೆ ದೊರೆತಿದೆ.
ಮಡಿಕೇರಿ ದಸರಾ ಕರಗ ಉತ್ಸವಕ್ಕೆ ಸುಮಾರು 225 ವರ್ಷಗಳ ಇತಿಹಾಸವಿದ್ದು, ರಾಜರ ಆಳ್ವಿಕೆಯ ಕಾಲದಿಂದಲೇ ಈ ಆಚರಣೆ ನಡೆಯುತ್ತಾ ಬರುತ್ತಿದೆ. ಆಗಿನ ಕಾಲದಿಂದಲೂ ಮಡಿಕೇರಿಯಲ್ಲಿ ನೆಲೆಸಿರುವ ಗೌಳಿ ಸಮುದಾಯದ ಪೂಜಾರಿ ಮನೆತನದವರು ಈ ಕರಗೋತ್ಸವನ್ನು ನಡೆಸಿಕೊಂಡು ಬರುತ್ತಿರುವುದು ವಿಶೇಷ.
ಸೆ. 30 ರಿಂದ ಅ. 3ರ ವರೆಗೆ ಕರಗಗಳು ಸಂಪ್ರದಾಯದಂತೆ ನಗರ ಪ್ರದಕ್ಷಿಣೆ ಮಾಡಲಿರುವ ನಾಲ್ಕು ಕರಗಗಳು ವಿಜಯ ದಶಮಿಯಂದು ರಾತ್ರಿ ಮಡಿಕೇರಿ ರಾಜಬೀದಿಯಲ್ಲಿ ನಡೆಯುವ ಶೋಭಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ. ಅ.9 ರಂದು ಬೆಳಗ್ಗಿನ ಜಾವ ಬನ್ನಿ ಮಂಟಪದಲ್ಲಿ ಬನ್ನಿ ಕಡಿಯುವುದರೊಂದಿಗೆ ಕರಗಗಳು ದಸರಾ ಮಹೋತ್ಸವಕ್ಕೆ ತೆರೆ ಎಳೆಯಲಿವೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…