ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…