ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…