ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…