ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…