ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…