ಸಂಪಾಜೆ: ಮಾಣಿ – ಮಡಿಕೇರಿ ರಸ್ತೆಯ ಸಂಪಾಜೆ ಘಾಟಿ ರಸ್ತೆಯ ಕಾಟಿಕೇರಿ ಬಳಿ ರಸ್ತೆ ಬಿರುಕು ಬಿಟ್ಟಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಮಡಿಕೇರಿ ಹಾಗೂ ಸಂಪಾಜೆ ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಇದೀಗ ಕಾಟಿಕೇರಿ ಬಳಿ ಕಳೆದ ವರ್ಷದ ಭೂಕುಸಿತವಾದ ಪ್ರದೇಶದಲ್ಲಿಯೇ ಬಿರುಕು ಕಂಡುಬಂದಿದೆ. ಇಲ್ಲಿ ತಡೆಗೊಡೆ ನಿರ್ಮಾಣ ಮಾಡಲಾಗಿತ್ತು. ಇದೀಗ ರಸ್ತೆ ಬಿರುಕು ಕಾರಣದಿಂದ ಘನ ವಾಹನಗಳ ಓಡಾಟಕ್ಕೆ ನಿಯಂತ್ರಣ ಮಾಡಲಾಗಿದೆ.
ಮಳೆಯ ಕಾರಣದಿಂದ ಪ್ರತೀ ವರ್ಷದಂತೆ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿತೇ ಅಥವಾ ಕಳೆದ ವರ್ಷದ ಜಲಪ್ರಳಯದ ಪರಿಣಾಮವಾಗಿ ಈಗ ಮಳೆ ಸುರಿದಾಗ ರಸ್ತೆ ಬಿರುಕು ಬಿಟ್ಟಿದ್ದೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಯಾವುದೇ ಆತಂಕದ ಸ್ಥಿತಿ ಇಲ್ಲ. ಸಣ್ಣ ಪ್ರಮಾಣದಲ್ಲಿ ಮಾತ್ರವೇ ಬಿರುಕು ಕಾಣಿಸಿಕೊಂಡಿದೆ.
ರಸ್ತೆ ಬಿರುಕು ಬಿಟ್ಟಿರುವ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಹೆದ್ದಾರಿ ಇಲಾಖೆಯ ಇಂಜಿನಿಯರ್ ಗಳಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಬ್ಯಾರಿಕೇಡ್ ಅಳವಡಿಕೆ ಮಾಡಿ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ.
ರಸ್ತೆ ಬಿರುಕು ಬಿಟ್ಟಿರುವ ವಿಡಿಯೋ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…