ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಹಾನಿಗೀಡಾಗಿರುವ ರಸ್ತೆ ಹಾಗೂ ಸೇತುವೆಗಳ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಮೂಲಕ ಹೆಚ್ಚುವರಿಯಾಗಿ 58 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಭರವಸೆ ನೀಡಿದ್ದಾರೆ.
ಮಳೆಹಾನಿಗೀಡಾದ ಮಡಿಕೇರಿ-ಸಂಪಾಜೆ ಮಾರ್ಗ ರಾಷ್ಟ್ರೀಯ ಹೆದ್ದಾರಿಗೆ ಭೇಟಿ ನೀಡಿದ ಅವರು, ಮಡಿಕೇರಿ, ಕಾಟಕೇರಿ, 2 ನೇ ಮೊಣ್ಣಂಗೇರಿ ಬಳಿ ಕುಸಿದಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಎಂ.ಕಾರಜೋಳ ಅವರು ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಮಡಿಕೇರಿ-ಸಂಪಾಜೆ, ಕೊಣನೂರು-ಮಾಕುಟ್ಟ, ವಿರಾಜಪೇಟೆ-ಕೊಡ್ಲಿಪೇಟೆ ಹೀಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ರಸ್ತೆಗಳು ಕುಸಿದಿವೆ, ಸೇತುವೆಗಳು ಹದಗೆಟ್ಟಿವೆ ಆ ನಿಟ್ಟಿನಲ್ಲಿ ರಸ್ತೆ, ಸೇತುವೆಗಳನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಈಗಾಗಲೇ ಮುಖ್ಯಮಂತ್ರಿ ಅವರು 536 ಕೋಟಿ ರೂ. ವಿಶೇಷ ಪ್ಯಾಕೇಜ್ನ್ನು ಘೋಷಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಿಂದ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ರಸ್ತೆ ಮತ್ತು ಸೇತುವೆಗಳು ಹದಗೆಡುತ್ತಿವೆ. ಆದ್ದರಿಂದ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕರ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ಗಣೇಶ್, ಅಧೀಕ್ಷಕ ಎಂಜಿನಿಯರ್ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಹೊಳ್ಳ ಇತರರು ಹಾಜರಿದ್ದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…