ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು
ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?
ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ
ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…