ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು
ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?
ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ
ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…