ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು
ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?
ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ
ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…