ನಿನ್ನ ಗರ್ಭದಿಂದ ನಾನಂದು ಹೊರಬಂದೆ, ನನ್ನ ಕಂಡೆ ನೀ ಮಗಳಂತೆ
ಸಾಗರದಲ್ಲಿಯ ನೀರಿನಂತೆ, ಭುವಿಯಲ್ಲಿ ಕಲ್ಲು ನೆರೆದಂತೆ
ನಿನ್ನ ಪ್ರೀತಿಯ ಚುಂಬನ,ನನಗದುವೇ ಅಮೃತ ಸಿಂಚನ
ಅಮ್ಮಾ ನಿನ್ನ ಮಡಿಲು,ನನಗದುವೇ ತೂಗುವ ತೊಟ್ಟಿಲು
ಎಡವಿ ಬಿದ್ದಾಗ, ಕೈ ಹಿಡಿದು ನಡೆಸಿದೆ ನೀನು
ನಡೆವ ಕಾಲಿಗೆ, ಗೆಜ್ಜೆ ಕಟ್ಟಿ ಕುಣಿಸಿದೆ ನೀನು
ನನ್ನ ನಗುವಲ್ಲಿ,ನೋವನ್ನೆಲ್ಲಾ ಮರೆತೆ ನೀನು
ನಿನ್ನ ಪ್ರೀತಿಯ ಸಾರೊಟಿಗೆ ಸಾರಥಿಯಾಗಲೇ ನಾನು?
ಮುಂಜಾನೆ ರವಿ ಕಾಣೋ ಮುನ್ನ ಕಾಣೋ ದೇವಿ ನೀನು
ಚಂದಿರ ಮರೆಯಾಗೋ ತನಕ ದುಡಿಯುವ ಮಾತೆ ನೀನು
ನಮಗಾಗಿಯೇ ನಿನ್ನೆಲ್ಲ ತವಕ,ಬಯಸಿದವಳಲ್ಲ ಹೊನ್ನು ಕನಕ
ನನ್ನಲ್ಲಿಹ ಆತಂಕ ಕೊನೆಯಾಗದೆ ನಿನ್ನ ಈ ಕಾಯಕ
ಸಾವಿರ ಸಾವಿರ ಕನಸುಗಳೇ ಹುದುಗಿದ್ದರೂ
ನಾನಿನ್ನ ಬಿಡಲಾರೆನು ನನ್ನಾಣೆಗೂ
ಸುಖದ ಸುಪ್ಪತ್ತಿಗೆಯೇ ನನ್ನ ಮುಂದಿದ್ದರೂ
ಈ ಜೀವ ಮುಡಿಪಾಗಿಡುವೆ ನಿನಗೆಎಂದೆಂದಿಗೂ…….
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…