Advertisement
ಸುದ್ದಿಗಳು

ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮ – ಭಾರತೀಯ ಸಂಸ್ಕೃತಿಗೆ ಅಳಿವಿಲ್ಲ: ರವಿಶಂಕರ್

Share

ಪುತ್ತೂರು: ನಮ್ಮ ದೇಶದ ಇತಿಹಾಸ, ಸಂಸ್ಕೃತಿಯನ್ನು ಯಾವುದೇ ಕಾರಣಕ್ಕೂ ನಾಶ ಮಾಡಲು ಸಾಧ್ಯವಿಲ್ಲ. ಅದಕ್ಕೆ ಉದಾಹರಣೆ ಎಂದರೆ ಹಲವು ವಿದೇಶಿಯರ ದಾಳಿಯನ್ನು ಎದುರಿಸಿದ ಭಾರತ ಇಂದಿಗೂ ತನ್ನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬಿಟ್ಟುಕೊಟ್ಟಿಲ್ಲ. ಯಾವುದೇ ರೀತಿಯಲ್ಲಿಯೂ ತನ್ನತನವನ್ನು ಕಳೆದುಕೊಂಡಿಲ್ಲ. ಪಾಶ್ಚತ್ಯ ಸಂಸ್ಕೃತಿಯ ಪ್ರಭಾವಗಳು ಹೊರ ನೋಟಕ್ಕೆ ಕಂಡು ಬಂದರೂ ಭಾರತೀಯತೆಯನ್ನು ನಾವೆಲ್ಲರೂ ಮರೆತಿಲ್ಲ ಎನ್ನುವುದು ಸಂತಸದ ವಿಚಾರ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರವಿಶಂಕರ್ ಜಿ.ಕೆ. ಹೇಳಿದರು.

Advertisement
Advertisement

ಅವರು ಇಲ್ಲಿನ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸುವ ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ಸಾರೇ ಜಹಾಂಸೇ ಅಚ್ಛಾ’ ಎಂಬ ವಿಷಯದ ಬಗ್ಗೆ ಗುರುವಾರ ಮಾತನಾಡಿದರು. ನಮ್ಮ ದೇಶದ ಅಭಿವೃದ್ಧಿ ನಮ್ಮ ಕೈಗಳಲ್ಲಿದೆ. ಇಂದಿನ ವಾಸ್ತವತೆಯನ್ನು ಒಪ್ಪಿಕೊಂಡು ಮುಂದಿನ ಹಾದಿಯನ್ನು ಕಂಡುಕೊಂಡಾಗ ಒಂದು ಉತ್ತಮ ದೇಶವಾಗಿ ರೂಪಿಸಲು ಸಾಧ್ಯ. ಅದೇ ರೀತಿ ನಮ್ಮ ಸ್ವಾತಂತ್ರ್ಯದ ಬಳಿಕ ಭಾರತದ ಬಗ್ಗೆ ನಮ್ಮ ಯುವಕರಲ್ಲಿ ಹಲವು ರೀತಿಯ ದೃಷ್ಟಿಕೋನವಿದ್ದರೂ, ಅದನ್ನು ಕಾರ್ಯ ರೂಪಕ್ಕೆ ತರುವಲ್ಲಿ ಎಡವುತ್ತಿದ್ದಾರೆ. ಕೆಲವೊಂದು ವಿಚಾರಗಳ ಬಗೆಗಿನ ಅಲ್ಪ ಜ್ಞಾನವನ್ನಿಟ್ಟುಕೊಂಡು ಹಲವು ರೀತಿಯ ಅಭಿಪ್ರಾಯಗಳನ್ನು ತಿಳಿಸುವುದರ ಮೂಲಕ ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಸರಿಯಾಗಿ ಗಮನಿಸುವುದರ ಮೂಲಕ ಪರಿಹಾರವನ್ನು ಹುಡುಕಾಡುವ ಪ್ರಯತ್ನವನ್ನು ಮಾಡುವ ಎಂದು ಅಭಿಪ್ರಾಯಪಟ್ಟರು.

ವಾರದ ಉತ್ತಮ ಮಾತುಗಾರಾಗಿ ತೃತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಶಿವರಾಮ್ ಹಾಗೂ ರಾಮ್ ಕಿಶನ್ ಆಯ್ಕೆಯಾದರು. ದ್ವಿತೀಯ ವರ್ಷದ ಪತ್ರಿಕೋದ್ಯಮ ತರಗತಿಯು ಉತ್ತಮ ಮಾತುಗಾರರ ತಂಡವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಾದ ಅರುಣ್ ಕುಮಾರ್, ಶಶಿಧರ್, ದೀಕ್ಷಿತಾ, ತನುಶ್ರೀ, ಸವಿತಾ ರೈ, ಅನುಷಾ, ಸೌಜನ್ಯ ಹಾಗೂ ವಿನಿತಾ ಅನುಭವಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯ ಪಿ.ಆರ್. ನಿಡ್ಪಳ್ಳಿ ಹಾಗೂ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನಘಾ ಶಿವರಾಮ್ ಉಪಸ್ಥಿತರಿದ್ದರು.

ತೃತೀಯ ವರ್ಷದ ವಿದ್ಯಾರ್ಥಿನಿ ಜಯಶ್ರೀ ಸ್ವಾಗತಿಸಿ, ರಾಮ್ ಕಿಶನ್ ವಂದಿಸಿದರು. ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

6 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

6 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

22 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

22 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

22 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

23 hours ago