Advertisement
ಸುದ್ದಿಗಳು

ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮ – ಭಾರತೀಯ ಸಂಸ್ಕೃತಿಗೆ ಅಳಿವಿಲ್ಲ: ರವಿಶಂಕರ್

Share

ಪುತ್ತೂರು: ನಮ್ಮ ದೇಶದ ಇತಿಹಾಸ, ಸಂಸ್ಕೃತಿಯನ್ನು ಯಾವುದೇ ಕಾರಣಕ್ಕೂ ನಾಶ ಮಾಡಲು ಸಾಧ್ಯವಿಲ್ಲ. ಅದಕ್ಕೆ ಉದಾಹರಣೆ ಎಂದರೆ ಹಲವು ವಿದೇಶಿಯರ ದಾಳಿಯನ್ನು ಎದುರಿಸಿದ ಭಾರತ ಇಂದಿಗೂ ತನ್ನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಬಿಟ್ಟುಕೊಟ್ಟಿಲ್ಲ. ಯಾವುದೇ ರೀತಿಯಲ್ಲಿಯೂ ತನ್ನತನವನ್ನು ಕಳೆದುಕೊಂಡಿಲ್ಲ. ಪಾಶ್ಚತ್ಯ ಸಂಸ್ಕೃತಿಯ ಪ್ರಭಾವಗಳು ಹೊರ ನೋಟಕ್ಕೆ ಕಂಡು ಬಂದರೂ ಭಾರತೀಯತೆಯನ್ನು ನಾವೆಲ್ಲರೂ ಮರೆತಿಲ್ಲ ಎನ್ನುವುದು ಸಂತಸದ ವಿಚಾರ ಎಂದು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರವಿಶಂಕರ್ ಜಿ.ಕೆ. ಹೇಳಿದರು.

ಅವರು ಇಲ್ಲಿನ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸುವ ಮಣಿಕರ್ಣಿಕ ಮಾತುಗಾರರ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ಸಾರೇ ಜಹಾಂಸೇ ಅಚ್ಛಾ’ ಎಂಬ ವಿಷಯದ ಬಗ್ಗೆ ಗುರುವಾರ ಮಾತನಾಡಿದರು. ನಮ್ಮ ದೇಶದ ಅಭಿವೃದ್ಧಿ ನಮ್ಮ ಕೈಗಳಲ್ಲಿದೆ. ಇಂದಿನ ವಾಸ್ತವತೆಯನ್ನು ಒಪ್ಪಿಕೊಂಡು ಮುಂದಿನ ಹಾದಿಯನ್ನು ಕಂಡುಕೊಂಡಾಗ ಒಂದು ಉತ್ತಮ ದೇಶವಾಗಿ ರೂಪಿಸಲು ಸಾಧ್ಯ. ಅದೇ ರೀತಿ ನಮ್ಮ ಸ್ವಾತಂತ್ರ್ಯದ ಬಳಿಕ ಭಾರತದ ಬಗ್ಗೆ ನಮ್ಮ ಯುವಕರಲ್ಲಿ ಹಲವು ರೀತಿಯ ದೃಷ್ಟಿಕೋನವಿದ್ದರೂ, ಅದನ್ನು ಕಾರ್ಯ ರೂಪಕ್ಕೆ ತರುವಲ್ಲಿ ಎಡವುತ್ತಿದ್ದಾರೆ. ಕೆಲವೊಂದು ವಿಚಾರಗಳ ಬಗೆಗಿನ ಅಲ್ಪ ಜ್ಞಾನವನ್ನಿಟ್ಟುಕೊಂಡು ಹಲವು ರೀತಿಯ ಅಭಿಪ್ರಾಯಗಳನ್ನು ತಿಳಿಸುವುದರ ಮೂಲಕ ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಸರಿಯಾಗಿ ಗಮನಿಸುವುದರ ಮೂಲಕ ಪರಿಹಾರವನ್ನು ಹುಡುಕಾಡುವ ಪ್ರಯತ್ನವನ್ನು ಮಾಡುವ ಎಂದು ಅಭಿಪ್ರಾಯಪಟ್ಟರು.

ವಾರದ ಉತ್ತಮ ಮಾತುಗಾರಾಗಿ ತೃತೀಯ ವರ್ಷದ ವಿದ್ಯಾರ್ಥಿಗಳಾದ ಅನಘಾ ಶಿವರಾಮ್ ಹಾಗೂ ರಾಮ್ ಕಿಶನ್ ಆಯ್ಕೆಯಾದರು. ದ್ವಿತೀಯ ವರ್ಷದ ಪತ್ರಿಕೋದ್ಯಮ ತರಗತಿಯು ಉತ್ತಮ ಮಾತುಗಾರರ ತಂಡವಾಗಿ ಹೊರಹೊಮ್ಮಿತು. ವಿದ್ಯಾರ್ಥಿಗಳಾದ ಅರುಣ್ ಕುಮಾರ್, ಶಶಿಧರ್, ದೀಕ್ಷಿತಾ, ತನುಶ್ರೀ, ಸವಿತಾ ರೈ, ಅನುಷಾ, ಸೌಜನ್ಯ ಹಾಗೂ ವಿನಿತಾ ಅನುಭವಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯ ಪಿ.ಆರ್. ನಿಡ್ಪಳ್ಳಿ ಹಾಗೂ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನಘಾ ಶಿವರಾಮ್ ಉಪಸ್ಥಿತರಿದ್ದರು.

ತೃತೀಯ ವರ್ಷದ ವಿದ್ಯಾರ್ಥಿನಿ ಜಯಶ್ರೀ ಸ್ವಾಗತಿಸಿ, ರಾಮ್ ಕಿಶನ್ ವಂದಿಸಿದರು. ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

4 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

4 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

7 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

17 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

22 hours ago