Advertisement
ಸುದ್ದಿಗಳು

ಮಣಿಕ್ಕರ ಸರಕಾರಿ ಪ್ರೌಢಶಾಲೆ ಶೇ.100 ಸಾಧನೆ : ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Share

ಸವಣೂರು :ಕಠಿಣ ಪರಿಶ್ರಮಕ್ಕೆ ಎಂದೂ ಸೋಲಾಗದು,ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ.ಶೈಕ್ಷಣಿಕವಾಗಿ ಪುತ್ತೂರು ತಾಲೂಕು ರಾಜ್ಯಕ್ಕೆ ಮೊದಲಿಗರಾಗಬೇಕು.ಶೈಕ್ಷಣಿಕ ಕೇಂದ್ರದ ಬೆಳವಣಿಗೆಯಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ,ದಾನಿಗಳ,ಊರವರ ಶ್ರಮವೂ ಪ್ರಮುಖವಾಗಿದೆ. ಗುರು- ಶಿಷ್ಯರನ್ನು ಸಮ್ಮಾನಿಸಿದ್ದು ಉತ್ತಮ ಕೆಲಸ ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳೂ 100 ಫಲಿತಾಂಶ ದೊಂದಿಗೆ ಹೆಚ್ಚು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಬೇಕು ಶಾಲೆಯ ಎಲ್ಲಾ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಶಾಲಾ ಶೈಕ್ಷಣಿಕ ಸಾಧನೆ ಅಭಿನಂದನೆ ಸಲ್ಲಿಸುವುದಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

Advertisement
Advertisement

ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2018-19 ನೇ ಸಾಲಿನ ಎಸ್,ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ,ಶಾಲಾಭಿವೃದ್ದಿ ಸಮಿತಿ, ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿ.ಪಂ.ನ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲಾ ಆಟದ ಮೈದಾನ ವಿಸ್ತರಣೆ ,ಶಾಲೆಗೆ ರಂಗಮಂದಿರ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು.
ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ ಪೂಜಾರಿ ,ದಾನಿ, ರೋಟರೀ ಕ್ಲಬ್ ಬೆಳ್ಳಾರೆ ಟೌನ್ ಇದರ ನಿರ್ದೇಶಕ ವೆಂಕಪ್ಪ ಗೌಡ ನಾರ್ಕೋಡು ಪೆರ್ಜಿ ,ಮಣಿಕ್ಕರ ಪ್ರೌಢಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ರೈ ಪಾಲ್ತಾಡು. ನಿಕಟಪೂರ್ವ ಕಾರ್ಯಾಧ್ಯಕ್ಷ ಸಯ್ಯದ್ ಗಫೂರ್ ಸಾಹೇಬ್ ಪಾಲ್ತಾಡು , ,ಮಣಿಕ್ಕರ ಸ.ಹಿ.ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ, ಪ್ರಾಥಮಿಕ ಶಾಲಾ ಮುಖ್ಯಗುರು ವಿಶಾಲಾಕ್ಷಿ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯಸ್ಥ ಮಹಾಲಿಂಗೇಶ್ವರ ಸ್ವಾಗತಿಸಿ ,ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ವಂದಿಸಿದರು.ಶಿಕ್ಷಕಿ ಗೀತಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

1 hour ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

12 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago