Advertisement
ಸುದ್ದಿಗಳು

ಮಣಿಕ್ಕರ ಸರಕಾರಿ ಪ್ರೌಢಶಾಲೆ ಶೇ.100 ಸಾಧನೆ : ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Share

ಸವಣೂರು :ಕಠಿಣ ಪರಿಶ್ರಮಕ್ಕೆ ಎಂದೂ ಸೋಲಾಗದು,ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ.ಶೈಕ್ಷಣಿಕವಾಗಿ ಪುತ್ತೂರು ತಾಲೂಕು ರಾಜ್ಯಕ್ಕೆ ಮೊದಲಿಗರಾಗಬೇಕು.ಶೈಕ್ಷಣಿಕ ಕೇಂದ್ರದ ಬೆಳವಣಿಗೆಯಲ್ಲಿ ಶಾಲಾಭಿವೃದ್ದಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ,ದಾನಿಗಳ,ಊರವರ ಶ್ರಮವೂ ಪ್ರಮುಖವಾಗಿದೆ. ಗುರು- ಶಿಷ್ಯರನ್ನು ಸಮ್ಮಾನಿಸಿದ್ದು ಉತ್ತಮ ಕೆಲಸ ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳೂ 100 ಫಲಿತಾಂಶ ದೊಂದಿಗೆ ಹೆಚ್ಚು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಬೇಕು ಶಾಲೆಯ ಎಲ್ಲಾ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ ಶಾಲಾ ಶೈಕ್ಷಣಿಕ ಸಾಧನೆ ಅಭಿನಂದನೆ ಸಲ್ಲಿಸುವುದಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2018-19 ನೇ ಸಾಲಿನ ಎಸ್,ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ,ಶಾಲಾಭಿವೃದ್ದಿ ಸಮಿತಿ, ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿ.ಪಂ.ನ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಲಾ ಆಟದ ಮೈದಾನ ವಿಸ್ತರಣೆ ,ಶಾಲೆಗೆ ರಂಗಮಂದಿರ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು.
ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ ಪೂಜಾರಿ ,ದಾನಿ, ರೋಟರೀ ಕ್ಲಬ್ ಬೆಳ್ಳಾರೆ ಟೌನ್ ಇದರ ನಿರ್ದೇಶಕ ವೆಂಕಪ್ಪ ಗೌಡ ನಾರ್ಕೋಡು ಪೆರ್ಜಿ ,ಮಣಿಕ್ಕರ ಪ್ರೌಢಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ರೈ ಪಾಲ್ತಾಡು. ನಿಕಟಪೂರ್ವ ಕಾರ್ಯಾಧ್ಯಕ್ಷ ಸಯ್ಯದ್ ಗಫೂರ್ ಸಾಹೇಬ್ ಪಾಲ್ತಾಡು , ,ಮಣಿಕ್ಕರ ಸ.ಹಿ.ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ, ಪ್ರಾಥಮಿಕ ಶಾಲಾ ಮುಖ್ಯಗುರು ವಿಶಾಲಾಕ್ಷಿ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯಸ್ಥ ಮಹಾಲಿಂಗೇಶ್ವರ ಸ್ವಾಗತಿಸಿ ,ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ ವಂದಿಸಿದರು.ಶಿಕ್ಷಕಿ ಗೀತಾ ಬಿ.ವಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago