ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.
ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…