ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.
ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…