ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.
ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…