ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.
ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…