ದೇಲಂಪಾಡಿ: ದೇಲಂಪಾಡಿ ಗ್ರಾಮದ ಮಣಿಯೂರು ಶ್ರೀ ಶಾಸ್ತಾರ ದೇವಸ್ಥಾನದ ದೇವರ ಗರ್ಭಗುಡಿಯ ಶಿಲನ್ಯಾಸ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಹಾಗೂ ಶಿಲ್ಪಿ ಬೆದ್ರಡ್ಕ ರಮೇಶ್ ಕಾರಂತರ ನೇತೃತ್ವದಲ್ಲಿ ದೇವರ ಗರ್ಭಗುಡಿಯ ಶಿಲನ್ಯಾಸ ನೆರವೇರಿತು.
ಪೂಜಾ ವಿಧಿವಿಧಾನಗಳಿಗೆ ಬ್ರಹ್ಮಶ್ರೀ ಶ್ರೀಧರ ತಂತ್ರಿ ಅವರೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ತ್ರಿವಿಕ್ರಮ ಮನೋಳಿತ್ತಾಯ ಸಹಕರಿಸಿದರು. ಭೂಮಿ ಪೂಜೆ, ಬ್ರಹ್ಮರಕ್ಷಸು , ನಾಗಬ್ರಹ್ಮನ ಸ್ಥಾನ ಬಾಲಾಲಯಕ್ಕೆ ಸ್ಥಳಾಂತರ ಹಾಗೂ ಇತರ ದೇವತಾ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ದೇವಸ್ಥಾನದ ಮೋಕ್ತೆಸರರಾದ ಚಿಕ್ಕಪ್ಪ ನ್ಯಾಕ್, ಮಣಿಯೂರು ಶ್ರೀ ಶಾಸ್ತಾರ ಜೀರ್ಣೋದ್ಧಾರ ಸಮಿತಿ ದೇಲಂಪಾಡಿಯ ಕಾರ್ಯಾಧ್ಯಕ್ಷ ಸದಾಶಿವ ರೈ ಬೆಳ್ಳಿಪ್ಪಾಡಿ, ಖಜಾಂಜಿ ಗೋಪಾಲಕೃಷ್ಣ ಕುಂಜತ್ತಾಯ, ಜೀರ್ಣೋದ್ಧಾರ ಸಮಿತಿ ಸರ್ವ ಸದಸ್ಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…