ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…