ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…