ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…