ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…