ವಿಟ್ಲ: ಕಟ್ಟಡ ನಿರ್ಮಾಣ ಕಾಮಗಾರಿ ಸಂದರ್ಭ ಮಣ್ಣು ಕುಸಿದು 3 ಮಂದಿ ಮೃತಪಟ್ಟ ಘಟನೆ ವಿಟ್ಲ ಬಳಿಯ ಒಡಿಯೂರಿನಲ್ಲಿ ನಡೆದಿದೆ. ಶನಿವಾರ ಜೆಸಿಬಿ ಮೂಲಕ ಕೆಲಸ ನಡೆದಿತ್ತು. ಅದಾದ ಬಳಿಕ ಸಮತಟ್ಟು ಮಾಡುವ ವೇಳೆ ದಿಬ್ಬ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಗಾಗಿ ಜೆಸಿಬಿ ಮೂಲಕ ಪಿಲ್ಲರ್ ಗೆ ಅಡಿಪಾಯ ತೆಗೆಯಲಾಗಿತ್ತು. ಬಳಿಕ ಪಿಲ್ಲರ್ ಕೆಳಭಾಗದ 3 ಮಂದಿ ಸಮತಟ್ಟು ಕೆಲಸ ನಡೆಸುತ್ತಿದ್ದಾಗ ಸುಮಾರು 70 ಅಡಿ ಎತ್ತರದ ದಿಬ್ಬ ಕುಸಿತವಾಗಿ ಮಣ್ಣಿನೊಳಗೆ ಸಿಲುಕಿಕೊಂಡ ಕಾರ್ಮಿಕರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಸ್ಥಳೀಯರಾದ ಬಾಳಪ್ಪ, ರಮೇಶ ಹಾಗೂ ಪ್ರಕಾಶ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ , ವಿಟ್ಲ ಕಂದಾಯ ನಿರೀಕ್ಷಕರು, ಬಂಟ್ವಾಳ ಪೋಲಿಸ್ ವೃತ್ತ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…