ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್ವೇರ್ ಬಂದ್ ಮಾಡಲಾಗುತ್ತದೆ.
ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…