ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್ವೇರ್ ಬಂದ್ ಮಾಡಲಾಗುತ್ತದೆ.
ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…