ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿರುವ ಮತದಾರರ ಪರಿಶೀಲನೆ ನಡೆಯುತ್ತಿದ್ದು, ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಯೋಂದಿಗೆ ಆಧಾರ್ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಯನ್ನು ಅಥವಾ ಆಧಾರ್ ಗುರುತಿನ ಚೀಟಿ ಇಲ್ಲದವರು ಪಡಿತರ ಚೀಟಿಯ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಬಿಎಲ್ಓ ಗಳಲ್ಲಿ ಎರಡು ದಿನದಲ್ಲಿ ತಪ್ಪದೆ ನೀಡಲು ಮತದಾರರಲ್ಲಿ ಕೋರಲಾಗಿದೆ. ಅ.15 ರಂದು ಇವಿಪಿ ಸಾಫ್ಟ್ವೇರ್ ಬಂದ್ ಮಾಡಲಾಗುತ್ತದೆ.
ಮತದಾರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಪರಿಶೀಲನೆ ಮಾಡಲು, ತಪ್ಪುಗಳೇನಾದರು ಇದ್ದರೆ ಸ್ವತಃ ಪರಿಶೀಲಿಸಿಕೊಳ್ಳಲು ಅವಕಾಶವಿದೆ. ತಪ್ಪುಗಳೇನಾದರೂ ಇದ್ದಲ್ಲಿ ಬೆರಳ ತುದಿಯಲ್ಲಿಯೇ ಸರಿಪಡಿಸಿಕೊಳ್ಳಲು ವೋಟರ್ ಹೆಲ್ಪ್ ಲೈನ್ ಮೊಬೈಲ್ ಆಪ್ ಮೂಲಕ ಚುನಾವಣಾ ಆಯೋಗ ಅ.15 ರವರೆಗೆ ಅವಕಾಶವ ಕಲ್ಪಿಸಿದೆ. ತಡ ಮಾಡದೇ ಇಂದೇ ಪರಿಶೀಲಿಸಿಕೊಳ್ಳಿ ಹಾಗೂ ನಿಮ್ಮ ಕುಟುಂಬವನ್ನು ಒಟ್ಟಿಗೆ ಇರುವಂತೆ ಟ್ಯಾಗ್ ಮಾಡಿಕೊಳ್ಳಿ ಎಂದು ಸುಳ್ಯ ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…